10th ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿ ಹುದ್ದೆ, ಮನೆಯಲ್ಲಿ ಕುಳಿತು ಈ ಕೆಲಸ ಮಾಡಬಹುದು.

ಕರ್ನಾಟಕದಲ್ಲಿರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೂ ಸಿಹಿ ಸುದ್ದಿ. ಭಾರತೀಯ ಅಂಚೆ ಇಲಾಖೆಯಿಂದ ಪೋಸ್ಟ್ ಆಫೀಸ್ ಲೈಫ್ ಇನ್ಸೂರೆನ್ಸ್ ಏಜೆಂಟ್ 2023 ನೇಮಕಾತಿ ನಡೆಯುತ್ತಿದೆ. ಯಾವುದೇ ಪರೀಕ್ಷೆ ಇಲ್ಲದೆ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನೇರವಾಗಿ ಆಯ್ಕೆ ಆಗಬಹುದಾಗಿದೆ. ಇದಕ್ಕಾಗಿ ಇಲಾಖೆ ವತಿಯಿಂದಲೇ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿದ್ದು ವಯಸ್ಸಿನ ಮಿತಿಯಲ್ಲೂ ಕೂಡ ಬಾರಿ ಸಡಿಲಿಕೆ ಇದೆ. ಕರ್ನಾಟಕದಲ್ಲಿರುವ ಎಲ್ಲಾ ಪುರುಷ ಮತ್ತು ಮಹಿಳಾ ಆಸಕ್ತ ಅಭ್ಯರ್ಥಿಗಳು ಕೂಡ ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now

ಈ ಅಂಕಣದಲ್ಲಿ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಅಧಿಸೂಚನೆಯಲ್ಲಿರುವ ಪ್ರಮುಖ ಅಂಶಗಳಾದ ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಬೇಕಾಗುವ ಪ್ರಮುಖ ದಾಖಲೆಗಳು, ಅರ್ಜಿ ಸಲ್ಲಿಸಲು ಇರುವ ಕಡೇ ದಿನಾಂಕ, ಉದ್ಯೋಗ ಸ್ಥಳ ಮತ್ತು ಹುದ್ದೆಯ ವಿವರದ ಕುರಿತ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಕೂಡ ಹಂಚಿಕೊಂಡು ಹೆಚ್ಚಿನ ಉದ್ಯೋಗ ಆಕಾಂಕ್ಷಿಗಳಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ಇಲಾಖೆ:- ಭಾರತೀಯ ಅಂಚೆ ಇಲಾಖೆ.
ನೇಮಕಾತಿ:- ಪೋಸ್ಟ್ ಆಫೀಸ್ ಲೈಫ್ ಇನ್ಸೂರೆನ್ಸ್ ಏಜೆಂಟ್ ನೇಮಕಾತಿ 2023.
ಉದ್ಯಮ:- ಅಂಚೆ ಕಚೇರಿ ಜೀವ ವಿಮೆ (ಭಾರತ ಸರ್ಕಾರ).
ಕೆಲಸದ ಸ್ಥಳ:- ಉತ್ತರ ಕನ್ನಡ.
ಹುದ್ದೆಯ ಹೆಸರು:- ಜೀವ ವಿಮಾ ಏಜೆಂಟ್.
ಹುದ್ದೆಗಳ ಸಂಖ್ಯೆ:- ಹಲವು ಹುದ್ದೆಗಳು.

ಶೈಕ್ಷಣಿಕ ವಿದ್ಯಾರ್ಹತೆ:-
● ಅಂಚೆ ಇಲಾಖೆಯ ನೇಮಕಾತಿ ಅನುಸೂಚನೆಯ ಪ್ರಕಾರ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC, PUC ಅಥವಾ ತತ್ಸಮಾನ ತರಗತಿ ಉತ್ತೀರ್ಣವಾಗಿರುವವರು ಅರ್ಜಿ ಸಲ್ಲಿಸಬಹುದು.
● ಕೆಲಸದ ಅನುಭವ ಹೊಂದಿರುವ ಅವಶ್ಯಕತೆ ಇರುವುದಿಲ್ಲ.
ವಯಸ್ಸಿನ ಮಿತಿ:-
● ಕನಿಷ್ಠ 18 ವರ್ಷಗಳು
● ಗರಿಷ್ಠ 60 ವರ್ಷಗಳು

ಅರ್ಜಿ ಸಲ್ಲಿಸುವ ವಿಧಾನ:- ಆಫ್ಲೈನ್ ಮೂಲಕ…
● ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು
● ಅರ್ಜಿ ನಮೂನೆಗಳನ್ನು dokarwar.ka@indiapost.gov.in ವೆಬ್ಸೈಟ್ ಅಲ್ಲಿ ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿಕೊಂಡು ಪಡೆದುಕೊಳ್ಳಬಹುದು.
● ಹತ್ತಿರದಲ್ಲಿರುವ ಅಂಚೆಠಾಣೆಗೆ ಭೇಟಿ ಕೊಟ್ಟು ಅರ್ಜಿ ಫಾರಂ ಅನ್ನು ಪಡೆಯಬಹುದು.
● ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಸ್ವಯಂ ಧೃಡೀಕರಿಸಿದ ದಾಖಲೆಗಳ ಪ್ರತಿ ಜೊತೆ ಕಡೆ ದಿನಾಂಕದ ಒಳಗಾಗಿ ಕಾರವಾರ ಅಂಚೆ ಕಚೇರಿ ಇಲಾಖೆಗೆ ತಲುಪಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವಿಳಾಸ:-
● ಹೆಚ್ಚಿನ ಮಾಹಿತಿ ಬೇಕಾದಲ್ಲಿ ಅಂಚೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ತಿಳಿದುಕೊಳ್ಳಬಹುದು.
● ಅಥವಾ ಹತ್ತಿರದಲ್ಲಿರುವ ಅಂಚೆಕಛೇರಿ ಸಿಬ್ಬಂದಿಗಳನ್ನು ವಿಚಾರಿಸಬಹುದು.
● do.karwar.ka@indiapost.gov.in ಗೆ ಭೇಟಿ ಕೊಟ್ಟು ತಿಳಿದುಕೊಳ್ಳಬಹುದು.
● ಕಾರವಾರ ಬ್ರಾಂಚಿನ ದೂರವಾಣಿ ಸಂಖ್ಯೆ 08382 – 221431 ಗೆ ಕರೆ ಮಾಡಿ ವಿಚಾರಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:-
● ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ ಭರ್ತಿ ಮಾಡಿದ ಅರ್ಜಿ ಫಾರಂ.
● ಆಧಾರ್ ಕಾರ್ಡ್ ಪ್ರತಿ
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳ ಪ್ರತಿ.
● ಇನ್ನಿತರ ಯಾವುದೇ ಪ್ರಮುಖ ದಾಖಲೆಗಳು ಇದ್ದಲ್ಲಿ ಅದರ ಪ್ರತಿಗಳನ್ನು ಸಹ ಲಗತ್ತಿಸಬಹುದು.

ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 17.05.2023.
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 02.06.2023.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now