ರಾಜ್ಯದ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ (Governmentbjob Aspirants) ಸಿಹಿಸುದ್ದಿ. ಈ ವರ್ಷ ವಿವಿಧ ಇಲಾಖೆಗಳ ನೇಮಕಾತಿಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇದರಲ್ಲಿ ಗ್ರಾಮ ಪಂಚಾಯಿತಿ (Gram Panchayath) ಮಟ್ಟದ ಹುದ್ದೆಗಳ ನೇಮಕಾತಿ ಕುರಿದಂತೆ ಈಗಾಗಲೇ ಸಚಿವರಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ.
ಗ್ರಾಮ ಪಂಚಾಯಿತಿ ಮಟ್ಟದ ಹುದ್ದೆಯಾಗಿರುವ ಗ್ರಾಮ ಲೆಕ್ಕಿಗ ಹುದ್ದೆಯನ್ನು ಈಗ ಗ್ರಾಮ ಆಡಳಿತ ಅಧಿಕಾರಿ ( Naming Village administative officer instead of Village Accountant) ಎಂದು ಹೆಸರು ಬದಲಾಯಿಸಲಾಗಿದೆ, ಈ ಹುದ್ದೆಯು ಕಂದಾಯ ಇಲಾಖೆ (Revenue Department) ವ್ಯಾಪ್ತಿಗೆ ಬರುತ್ತದೆ.
ಈ ಹುದ್ದೆಗಳ ನೇಮಕಾತಿ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು (Minister Krishna Bairegowda) ಮಾತನಾಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು.
BPL ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾ’ಕ್ ಕೊಟ್ಟ ಸರ್ಕಾರ.! ಸದ್ದಿಲ್ಲದೇ ರದ್ದಾಗುತ್ತಿವೆ ಲಕ್ಷಾಂತರ ಕಾರ್ಡುಗಳು.
ಜೊತೆಗೆ 357 ಸರ್ವೆಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 590 ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು ಸಚಿವರು ಸುದ್ದಿಗೋಷ್ಠಿಯೊಂದರಲ್ಲಿ ತಿಳಿಸಿದ್ದಾರೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗ್ರಾಮ ಲೆಕ್ಕಾಧಿಕಾರಿಗಳ ಕೊರತೆ ಇದೆ, ಇದರಿಂದ ರೈತರ ಕೆಲಸಗಳಿಗೆ ವಿಳಂಬವಾಗುತ್ತಿದೆ.
ಒಂದು ಜಿಲ್ಲೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ ಗ್ರಾಮಸ್ಥರಿಗೆ ಆಗುತ್ತಿರುವ ಅನಾನುಕೂಲತೆ ತಪ್ಪಿಸಲು ಸರ್ಕಾರ ಶೀಘ್ರವಾಗಿ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿ ನೇಮಕಾತಿ ಬಗ್ಗೆ ಪ್ರಸ್ತಾಪಿಸಿದೆ. ಇದರ ಬಗ್ಗೆ ಮಾತನಾಡಿದ ಸಚಿವರು ಈಗಾಗಲೇ ನೇಮಕಾತಿಯಾಗಿರುವ 750 ಸರ್ವೆಯರ್ಗಳಿಗೆ ತರಬೇತಿ ಕೊಡಲಾಗಿದೆ.
ಅವರೂ ಕಾರ್ಯಾರಂಭ ಮಾಡಲಿದ್ದಾರೆ. ಇದರಿಂದ ಕಂದಾಯ ಜಮೀನುಗಳ ಸಮೀಕ್ಷೆ ಕಾರ್ಯ ಸುಲಭವಾಗಲಿದೆ ಎಂದಿದ್ದಾರೆ. ಕಂದಾಯ ಇಲಾಖೆಯ ಯೋಜನೆಗಳನ್ನು ಗ್ರಾಮ ಮಟ್ಟಕ್ಕೆ ತಲುಪಿಸುವಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಮಹತ್ವದ ಸ್ಥಾನ ಹೊಂದಿದೆ.
SSLC ಪಾಸ್ ಆದವರಿಗೆ 4,237 ಸರ್ಕಾರಿ ಬಸ್ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆಸಕ್ತರು ತಪ್ಪದೇ ಅರ್ಜಿ ಸಲ್ಲಿಸಿ.!
ಗ್ರಾಮೀಣ ಮಟ್ಟದಲ್ಲಿರುವ ಸರ್ಕಾರದ ಅಧಿಕಾರಿ ಎಂದರೆ ಗ್ರಾಮ ಲೆಕ್ಕಿಗ ಈಗಿರುವ ಪದನಾಮದ ಪ್ರಕಾರ ಗ್ರಾಮ ಆಡಳಿತ ಅಧಿಕಾರಿ. ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಗ್ರಾಮಲೆಕ್ಕಿಗರ ಹುದ್ದೆಗೆ ಅನ್ವಯಿಸುವಂತೆ ಸೂಕ್ತ ತಿದ್ದುಪಡಿ ತರಲು ಪ್ರತ್ಯೇಕವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರದ ಈ ಹಿಂದೆ ಹೇಳಿತ್ತು.
ಆ ಪ್ರಕಾರವಾಗಿ ಇನ್ನು ಮುಂದೆ ದ್ವಿತೀಯ PUC ಯಲ್ಲಿ ಉತ್ತೀರ್ಣರಾದವರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಯಾಕೆಂದರೆ ಇದುವರೆಗೂ ದ್ವಿತೀಯ PUC ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದವರಿಂದ ಅರ್ಜಿ ಆಹ್ವಾನ ಮಾಡಿ, ಅವರ ಅಂಕಗಳ ಮೆರಿಟ್ ಅಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು.
ಆದರೆ ಕೋರೋನ ಅವಧಿಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳಿಸಿರುವುದರಿಂದ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿ ಆರಿಸುವುದು ಸಮಸ್ಯೆಯಾಗಿದೆ. ಹಾಗಾಗಿ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಅಗತ್ಯತೆ ಇರುವುದರಿಂದ ಆ ಪ್ರಕಾರವಾಗಿಯೇ ಅರ್ಹತೆ ಇರುವ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲು ನಿರ್ಧರಿಸಲಾಗಿದೆ.
ಪ್ರತಿ ತಿಂಗಳು ವಿದ್ಯಾರ್ಥಿಗಳಿಗೆ ಸಿಗಲಿದೆ 1500/- ವಿದ್ಯಾರ್ಥಿ ವೇತನ ಆಸಕ್ತರು ಅರ್ಜಿ ಸಲ್ಲಿಸಿ.!
ಈ ಬಗ್ಗೆ ಶೀಘ್ರದಲ್ಲಿಯೇ ಸರ್ಕಾರದ ವತಿಯಿಂದ ನೇಮಕಾತಿ ಕುರಿತಂತೆ ಸಂಪೂರ್ಣ ವಾದ ವರದಿಯನ್ನು ಪ್ರಕಟಣೆಯಲ್ಲಿ ತಿಳಿಸಲಾಗುತ್ತದೆ. ಆದರೆ ಯಾರೆಲ್ಲಾ ಸರ್ಕಾರಿ ಹುದ್ದೆ ಬಗ್ಗೆ ಆಸಕ್ತಿ ಇಟ್ಟುಕೊಂಡಿದ್ದೀರಿ ಮತ್ತು ದ್ವಿತೀಯ PUC ಉತ್ತೀರ್ಣರಾಗಿದ್ದೀರಿ ಕೂಡಲೇ ನಿಮ್ಮ ಅಭ್ಯಾಸವನ್ನು ತೀವ್ರಗೊಳಿಸಿಕೊಳ್ಳಿ.