ಗ್ರಾಮ ಪಂಚಾಯಿತಿಯಲ್ಲಿ ಭರ್ಜರಿ ನೇಮಕಾತಿ, ಬರೋಬ್ಬರಿ 25,000 ಜನ ಮಿತ್ರ ಹುದ್ದೆಗಳು.! ಆಸಕ್ತರು ಅರ್ಜಿ ಸಲ್ಲಿಸಿ.!

 

WhatsApp Group Join Now
Telegram Group Join Now

ನಮ್ಮ ದೇಶದಲ್ಲಿ ನಿರುದ್ಯೋಗ (Unemployment) ಎನ್ನುವುದು ಯುವಜನತೆಯನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದೆ. ಕೆಲಸ ಮಾಡಲು ಶಕ್ತಿ ಹಾಗೂ ಸಾಮರ್ಥ್ಯವಿದ್ದರೂ ಅವಕಾಶಗಳೇ ಇಲ್ಲದ ಪರಿಸ್ಥಿತಿ ಸರ್ಕಾರಿಗಳಿಗೂ ಕೂಡ ತಲೆ ನೋವಾಗಿದೆ. ಈ ಸಮಸ್ಯೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು (Government) ಸಾಧ್ಯವಾದಷ್ಟು ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸಲು ಮುಂದಾಗಿವೆ.

ಈ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರದಿಂದ ಹೊಸದೊಂದು ಪ್ರಯೋಗ ನಡೆಯುತ್ತಿದ್ದು, ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಸುಲಭವಾಗಿ ಜನರ ಪಡೆಯುವಂತೆ ಆಗಲು ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುವಂತಹ ಜನಮಿತ್ರರು (Jana Mithra) ಎನ್ನುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಚಿಂತಿಸುತ್ತಿದೆ.

ಈ ಸುದ್ದಿ ಓದಿ:- ಯಾವುದೇ ಗ್ಯಾರಂಟಿ ಇಲ್ಲದೆ ಸ್ವಂತ ಉದ್ಯೋಗ ಮಾಡಲು ಬಡ್ಡಿ ಇಲ್ಲದೆ 2 ಲಕ್ಷ ಸಾಲ.! ಕೆಂದ್ರ ಸರ್ಕಾರದಿಂದ ಘೋಷಣೆ.!

ಸರ್ಕಾರ ಇ- ಆಡಳಿತ ಇಲಾಖೆಯನ್ನು ( E-Administration Department ) ಬಳಸಿಕೊಂಡು ತಾಲೂಕು ಕಚೇರಿಗಳಲ್ಲಿ ( Taluk Office ) ಮಧ್ಯವರ್ತಿಗಳು ಜನಸಾಮಾನ್ಯರನ್ನು ಸುಲಿಗೆ ಮಾಡುವುದನ್ನು ತಪ್ಪಿಸಲು ಜನ ಮಿತ್ರ ಎನ್ನುವ ಹೊಸ ಯೋಜನೆ ರೂಪಿಸಿ ಅನುಕೂಲತೆ ಮಾಡಿಕೊಡಲಾಗುತ್ತಿದೆ.

ಜನಮಿತ್ರರು ಸರ್ಕಾರಿ ಕಚೇರಿಗಳ ಸೇವೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ತಲುಪಿಸಲಿದ್ದಾರೆ. ಇದರಿಂದ ಆಗುವ ಅನುಕೂಲತೆಗಳೇನು? ಯಾವೆಲ್ಲ ಸೇವೆ ಪಡೆಯಬಹುದು ಮತ್ತು ಈ ಜನಮಿತ್ರ ನೇಮಕಾತಿ ಹೇಗೆ ಆಗುತ್ತದೆ ಎನ್ನುವುದರ ವಿವರ ಹೀಗಿದೆ ನೋಡಿ.

ಈ ಸುದ್ದಿ ಓದಿ:- ರೇಷನ್ ಕಾರ್ಡ್ ಇದ್ದವರಿಗೆ ಇಂದಿನಿಂದ ಹೊಸ ಸೇವೆ ಆರಂಭ.!

ಅನುಕೂಲತೆಗಳು :-

* ಜನಮಿತ್ರರಿಗೆ ಕರೆ ಮಾಡಿ ತಮ್ಮ ಮನೆಯಲ್ಲಿ ಬೇಕಾದ ಸೇವೆ ಪಡೆಯಬಹುದು ಇದರಿಂದ ಪದೇ ಪದೇ ಕಚೇರಿಗಳಿಗೆ ಅಲೆದಾಡುವ ಅಗತ್ಯವಿರುವುದಿಲ್ಲ, ಈ ಮೂಲಕ ಸಮಯ, ಹಣ ಮತ್ತು ಶ್ರಮದ ಉಳಿತಾಯವಾಗುತ್ತದೆ.
* ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕಿದಂತಾಗುತ್ತದೆ
* ಸರ್ಕಾರಿ ಕಚೇರಿಯಲ್ಲಿ ಆಗುತ್ತಿರುವ ಜನದಟ್ಟಣೆಯ ತಡೆಯಬಹುದು.
* ನಿಗದಿತ ಅವಧಿಯಲ್ಲಿ ಸರಳವಾಗಿ ಸೇವೆ ಲಭ್ಯವಾಗುತ್ತದೆ.

ಯಾವೆಲ್ಲಾ ಸೇವೆ ಪಡೆಯಬಹುದು:-

* ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಅರ್ಜಿ
* ರಸಗೊಬ್ಬರಕ್ಕೆ ಅರ್ಜಿ
* ವಿವಿಧ ಲೈಸನ್ಸ್‌ಗಳ ನವೀಕರಣ
* ಪರಿಹಾರ ನಿಧಿಗೆ ಅರ್ಜಿ
* ಟ್ರೇಡರ್ ಲೈಸನ್ಸ್
* ಮಣ್ಣಿನ ಗುಣಮಟ್ಟ ಪರೀಕ್ಷೆಗೆ ಅರ್ಜಿ ಸಲ್ಲಿಕೆ
* ಮೀನು ಸಾಗಣೆ ಅರ್ಜಿ ಸಲ್ಲಿಕೆ
* ಅಂಕಪಟ್ಟಿ
* ಪೊಲೀಸರಿಗೆ ದೂರು ದಾಖಲು
* ಮರಣ ಪ್ರಮಾಣಪತ್ರ ಪಡೆಯಲು ಅರ್ಜಿ
* ವಿವಿಧ ಸಾಮಾಜಿಕ ಪಿಂಚಣಿಗಳಿಗೆ ಅರ್ಜಿ ಸಲ್ಲಿಕೆ, ಇತ್ಯಾದಿ…

ಈ ಸುದ್ದಿ ಓದಿ:- ಗೃಹಲಕ್ಷ್ಮಿ ಯೋಜನೆ ಮರು ಪರಿಶೀಲನೆ.! 26,000 ಮಹಿಳೆಯರಿಗೆ ಸಿಗಲ್ಲ 6ನೇ ಕಂತಿನ ಹಣ.!

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:-

* ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸಬೇಕು
* ಕನಿಷ್ಠ 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿರಬೇಕು
* ಕಂಪ್ಯೂಟರ್ ಕೌಶಲ ಇರಬೇಕು
* ಚಾಲನಾ ಪರವಾನಗಿ, ಸ್ವಂತ ದ್ವಿಚಕ್ರ ವಾಹನದ ಹೊಂದಿರಬೇಕು
* ಯಾವುದೇ ಬಗೆಯ ಅಪರಾಧ ಪ್ರಕರಣಗಳಿಂದ ಮುಕ್ತವಾಗಿರಬೇಕು.

ಆಯ್ಕೆ ಪ್ರಕ್ರಿಯೆ:-

* ಪ್ರತಿ ನಾಗರಿಕ ಸೇವಾ ಕೇಂದ್ರಗಳಿಗೆ 2 ರಿಂದ 4 ಜನಮಿತ್ರರನ್ನು ನೇಮಿಸಲಾಗುತ್ತದೆ, ಒಟ್ಟಾರೆ ರಾಜ್ಯಾದ್ಯಂತ ಅಂದಾಜು 25 ಸಾವಿರ ಜನಮಿತ್ರರನ್ನು ಈ ಸೇವೆಗೆ ನೇಮಕ ಮಾಡಲು ನಿರ್ಧರಿಸಲಾಗಿದೆ
* ಆನ್‌ಲೈನ್‌ ನಲ್ಲಿ ಅರ್ಜಿ ಸ್ವೀಕರಿಸಲಾಗುವುದು
* ಆನ್‌ಲೈನ್‌ನಲ್ಲಿಯೇ ಪರಿಶೀಲನೆ ಹಾಗೂ ಆಯ್ಕೆ ಮಾಡಿಕೊಂಡು, ಆನ್‌ಲೈನ್ ಮೂಲಕವೇ ತರಬೇತಿ ಕೂಡ ನೀಡಲಾಗುತ್ತದೆ.

ಈ ಸುದ್ದಿ ಓದಿ:- ಆಡು, ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ ರೈತರಿಗೆ PMEGP ಯೋಜನೆಯಡಿ 20 ದಿನಗಳಲ್ಲಿ ಸಿಗಲಿದೆ 20 ಲಕ್ಷ ಲೋನ್ 7 ಲಕ್ಷ ಸಬ್ಸಿಡಿ ಸಿಗುತ್ತೆ.!

ಜನ ಮಿತ್ರರ ಸೇವೆಯ ಬಳಕೆಯ ವಿಧಾನ:-

ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತ ನಂತರ ಕಂದಾಯ ವಿಭಾಗಗಳ ತಲಾ ಒಂದು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿ ಮಾಡಿ ನಂತರ ರಾಜ್ಯದಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ
* ಯೋಜನೆ ಜಾರಿಯಾದ ಮೇಲೆ ಸರ್ಕಾರದಿಂದ ಆಯ ಜಿಲ್ಲೆಗಳಿಗೆ ಸಂಬಂಧಪಟ್ಟ ಹಾಗೆ ಪ್ರತ್ಯೇಕವಾಗಿ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗುತ್ತದೆ.

* ಜನಮಿತ್ರರ ಸೇವೆ ಬೇಕು ಎಂಬುವವರು ಮೊಬೈಲ್‌ಗೆ ಮಿಸ್ ಕಾಲ್ ( Miss call ) ನೀಡಬೇಕು. ಅವರ ಹೆಸರು ಎಂಟ್ರಿ ಮಾಡಿ ಪಿನ್‌ಕೋಡ್ ( Pincode ) ಪಡೆದುಕೊಳ್ಳಬೇಕು. ನೋಂದಣಿ ಸಂಖ್ಯೆಯನ್ನು SMS ಮೂಲಕ ಕೂಡ ಕಳುಹಿಸಲಾಗುತ್ತದೆ. ನಂತರ ಜನಮಿತ್ರ ಆಪ್ ( Janamithra App ) ಮೂಲಕ ಜನಮಿತ್ರನಿಗೆ ಮಾಹಿತಿ ಕಳುಹಿಸಲಾಗುತ್ತದೆ.
* ಒಂದು ಗಂಟೆಯೊಳಗೆ ಸಂಬಂಧಿಸಿದ ನಾಗರಿಕರನ್ನು ಜನಮಿತ್ರ ಭೇಟಿ ಮಾಡುತ್ತಾರೆ.

ಈ ಸುದ್ದಿ ಓದಿ:- ಬಾಡಿಗೆ ಅಥವಾ ಲೀಸ್ ಅಗ್ರಿಮೆಂಟ್ ಕೇವಲ 11 ತಿಂಗಳಿಗೆ ಮಾತಗರ ಇರುತ್ತದೆ ಯಾಕೆ ಗೊತ್ತಾ.?

* ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯ ತನಕ ಆ ದಿನದ ನೋಂದಣಿಗೆ ಅವಕಾಶ ನೀಡಲಾಗುತ್ತದೆ. ರಾತ್ರಿ 8 ಗಂಟೆಯ ನಂತರದ ಅವಧಿಯನ್ನು ಮಾರನೇ ದಿನಕ್ಕೆ ಲೆಕ್ಕ ಹಾಕಲಾಗುತ್ತದೆ.
* ಅರ್ಜಿ ಸಲ್ಲಿಕೆ ಮತ್ತು ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಅರ್ಜಿ ಶುಲ್ಕದ ಜೊತೆಗೆ 50 ರೂ. ಮತ್ತು ಪ್ರಮಾಣ ಪತ್ರ ವಿತರಣೆಗೆ ಶುಲ್ಕವಾಗಿ 25 ರೂ. ನಿಗದಿ ಮಾಡಲಾಗುವುದು. ಶುಲ್ಕ ಸರ್ಕಾರಕ್ಕೆ ಬಂದರೆ ಉಳಿದ ಮೊತ್ತ ಜನಮಿತ್ರರಿಗೆ ಸಿಗಲಿದೆ.

 

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ

Leave a Comment

WhatsApp Group Join Now
Telegram Group Join Now