ಕಾರ್ಮಿಕ ಕಾರ್ಡ್ ಹೊಂದಿದವರ ಮಕ್ಕಳಿಗೆ ಸರ್ಕಾರದಿಂದ ಉಚಿತ ಟ್ಯೂಬ್ ವಿತರಣೆ, ಅರ್ಜಿ ಹಾಕುವುದು ಹೇಗೆ ನೋಡಿ.

 

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಮಿಕ ಕಾರ್ಡ್ / ಲೇಬರ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ  ಈಗಾಗಲೆ ಹಲವಾರು ಯೋಜನೆಗಳ ಅಡಿಯಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದ್ದು ಇದರಿಂದ ಕಾರ್ಮಿಕರ ಅಭಿವೃದ್ಧಿ ಆಗುತ್ತಿದೆ. ಈಗ ಮತ್ತೊಂದು ಯೋಜನೆಯನ್ನು ಜಾರಿಗೆ ತರಲಾಗಿದೆ.

ಲೇಬರ್ ಕಾರ್ಡ್ ಅಥವಾ ಕಾರ್ಮಿಕ ಕಾರ್ಡ್ ಇದ್ದವರ ಮಕ್ಕಳು ಓದುತ್ತಿದ್ದರೆ ಅಂತಹ ಮಕ್ಕಳಿಗೆ ಉಚಿತವಾಗಿ ಟ್ಯಾಬ್ ವಿತರಿಸುವ ಯೋಜನೆಯಾಗಿದೆ. ಇದು ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಅನುಷ್ಠಾನ ಗೊಂಡಿದೆ. ಬೆಳಗಾವಿ, ಬಳ್ಳಾರಿ, ರಾಮನಗರ ಜಿಲ್ಲೆಗಳಲ್ಲಿ ಈಗಾಗಲೇ ಟ್ಯಾಬ್ ಗಳನ್ನು ವಿತರಣೆ ಮಾಡಲಾಗಿದೆ. ಹಾಗಾದರೆ ಕಾರ್ಮಿಕ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಮಿಕರ ಮಕ್ಕಳಿಗೆ / ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಉಚಿತ ಟ್ಯಾಬ್‌ ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಅದಕ್ಕೆ ಅರ್ಹತೆಗಳು ಏನು? ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಯಾವುವು ಎಂದು ಇಲ್ಲಿ ತಿಳಿಸಲಾಗಿದೆ.

ಈ ಯೋಜನೆ ಯಡಿಯಲ್ಲಿ ಅರ್ಜಿ ಸಲ್ಲಿಸಲು ನಿಮ್ಮ ತಾಲ್ಲೂಕಿನ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಟ್ಯಾಬ್ ಪಡೆಯಲು ಬೇಕಾಗಿರುವ ಅರ್ಹತೆಗಳೇನು.? 

* ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯ ತಂದೆ ತಾಯಿಯರಲ್ಲಿ ಯಾರಾದರೂ ಒಬ್ಬರು ಕಡ್ಡಾಯವಾಗಿ ಲೇಬರ್ ಕಾರ್ಡ್ ಹೊಂದಿರಬೇಕು.
* ಈ ಹಿಂದೆ ಯಾವುದೇ ಯೋಜನೆ ಅಡಿಯಲ್ಲಿ ಟ್ಯಾಬ್ ಪಡೆದಿರಬಾರದು.

ಅರ್ಜಿ ಸಲ್ಲಿಸುವುದು ಹೇಗೆ.? 

ಈ ಯೋಜನೆ ಅಡಿಯಲ್ಲಿ ಯಾವುದೇ ರೀತಿ ಆನ್ಲೈನ್ ಅಪ್ಲಿಕೇಶನ್ ಹಾಕಲು ಅವಕಾಶಗಳು ಇಲ್ಲ. ಆದ್ದರಿಂದ ನೇರವಾಗಿ ಜಿಲ್ಲಾ/ ತಾಲ್ಲೂಕು ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಅಧಿಕೃತ ಅಗತ್ಯ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.  ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮೊದಲ ಹಂತದ ಯೋಜನೆಯನ್ನು ಪ್ರಾರಂಭಗೊಳಿಸಲಾಗಿದೆ. ಮುಂದೆ ಹಂತ ಹಂತವಾಗಿ ಇನ್ನುಳಿದ ಜಿಲ್ಲೆಗಳಲ್ಲಿಯೂ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಮೊದಲ ಹಂತದಲ್ಲಿ ಮೈಸೂರು, ಬೆಳಗಾವಿ, ಬೀದರ್, ರಾಮನಗರ ಜಿಲ್ಲೆಗಳಲ್ಲಿ ಟ್ಯಾಬ್ ಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು ಕೂಡಲೇ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಕೋರಿದೆ.

ಈ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳ ವಿವರ:

* ಲೇಬರ್ ಕಾರ್ಡ್ ದಾಖಲಾತಿ
* ಆಧಾರ್ ಕಾರ್ಡ್
* ವಿದ್ಯಾರ್ಥಿಯು ಓದುತ್ತಿರುವ ಬಗ್ಗೆ ವ್ಯಾಸಂಗ ಪ್ರಮಾಣ ಪತ್ರ
* ರೇಷನ್ ಕಾರ್ಡ್
* ಈ ಹಿಂದೆ ಯಾವುದೇ ಯೋಜನೆಯಲ್ಲಿ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು.

ಈ ಎಲ್ಲ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಜಿಲ್ಲೆಯ/ ತಾಲ್ಲೂಕಿನ  ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಹ ಫಲಾನುಭವಿಗಳನ್ನು ಜೇಷ್ಠತೆಯ ಹಾಗೂ ದಾಖಲೆಯ  ಆಧಾರದ ಮೇಲೆ  ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಿ ತಾಲೂಕುವಾರು ಟ್ಯಾಬ್ ವಿತರಿಸಲಾಗುವುದು ಎನ್ನಲಾಗಿದೆ. ಕೆಲವೊಂದು ಜಿಲ್ಲೆಗಳಲ್ಲಿ / ತಾಲ್ಲೂಕುಗಳಲ್ಲಿ ಇನ್ನೂ ಈ ಯೋಜನೆಯು ಪ್ರಾರಂಭವಾಗಿಲ್ಲದೆ ಇದ್ದ ಪಕ್ಷದಲ್ಲಿ ಯೋಜನೆಯ ಬಗ್ಗೆ ಹಾಗೂ ಅದನ್ನು ಯಾವಾಗ ಪ್ರಾರಂಭಿಸುತ್ತಾರೆ ಎನ್ನುವುದರ ಬಗ್ಗೆ ನಿಮ್ಮ ಜಿಲ್ಲೆಯ/ ತಾಲ್ಲೂಕಿನ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು.

 

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ

Leave a Comment

WhatsApp Group Join Now
Telegram Group Join Now