ಕಳೆದ ಒಂದು ವರ್ಷದಿಂದ ಕಂದಾಯ ಇಲಾಖೆಗೆ (Revenue Department) ಸಂಬಂಧಿಸಿದ ಹಾಗೆ ಸಾಕಷ್ಟು ಬದಲಾವಣೆಗಳು ಆಗಿವೆ ಹೊಸ ನಿಯಮಗಳನ್ನು ಮಾಡಲಾಗಿದೆ, ಆ ಪಟ್ಟಿಯಲ್ಲಿ ಮತ್ತೊಂದು ಹೊಸ ನಿಯಮವು ಕೂಡ ಸೇರುತ್ತದೆ. ಈ ಬಾರಿ ಆಸ್ತಿಗಳ ನೋಂದಣಿಗೆ ಸಂಬಂಧಪಟ್ಟ ಹಾಗೆ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಅದೇನೆಂದರೆ ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಸಮಯದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ರೈತರ ಪಹಣಿಗಳಿಗೆ ಆಧಾರ್ ಜೋಡಣೆ (Aadhar Join to RTC) ಕಡ್ಡಾಯ. ಈಗಾಗಲೇ ಕಾರ್ಯ ಆರಂಭಗೊಂಡಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Minister Krishna Bairegowda) ಅವರು ತಿಳಿಸಿದ್ದಾರೆ.
ಈ ಸುದ್ದಿ ಓದಿ:- KSRLPS ನೇಮಕಾತಿ 2024, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ
ವಿಕಾಸಸೌಧದಲ್ಲಿ ಮಾರ್ಚ್ 12ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ವಿಷಯ ಪ್ರಸ್ತಾಪಿಸಿ ನನ್ನ ಆಸ್ತಿ ಯೋಜನೆಯಡಿ ನನ್ನ ಆಸ್ತಿ ನನ್ನ ಗುರುತು ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪ್ರಾಯೋಗಿಕವಾಗಿ ಪರೀಕ್ಷೆ ಮಾಡಲಾಗಿದೆ ಮತ್ತು ಇಂದಿನಿಂದ ರಾಜ್ಯಾದ್ಯಂತ ಅಧಿಕೃತವಾಗಿ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಕ್ಷೇತ್ರವು ಕೂಡ ಡಿಜಿಟಲಿಕರಣಗೊಳ್ಳುತ್ತಿದೆ (Digitalization) ಹಾಗೆಯೇ ಕಂದಾಯ ಇಲಾಖೆಯೂ ಡಿಜಿಟಲೈಜ್ ಆಗಬೇಕು. ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗುವಂತೆ ಮಾಡಬೇಕು ಎನ್ನುವ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಕೈಕೊಳ್ಳಲಾಗಿದೆ, ಅದರ ಭಾಗವಾಗಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದಿದ್ದಾರೆ.
ಈ ಸುದ್ದಿ ಓದಿ:- ಸ್ಕೂಟರ್ ಖರೀದಿಗೆ ಸರ್ಕಾರದಿಂದ ಸಿಗಲಿದೆ 40,000 ಸಹಾಯಧನ.!
ಆಸ್ತಿ ವಿಚಾರವಾಗಿ ಪಾರದರ್ಶಕತೆ ತಂದ ರೀತಿ ಆಗುತ್ತದೆ, ಮೃ’ತಪಟ್ಟವರ ಹೆಸರಿನಲ್ಲಿ ಪಹಣಿಗಳು ಇದ್ದರೆ ದುರುಪಯೋಗ ಆಗುವ ಸಾಧ್ಯತೆಗಳು ಇರುತ್ತವೆ ಇದನ್ನು ತಪ್ಪಿಸಿದಂತಾಗುತ್ತದೆ, ಆಧಾರ್ ಜೋಡಣೆ ಮಾಡುವುದರಿಂದ ಯಾರದ್ದೋ ಆಸ್ತಿ ಮತ್ತಾರೋ ನೋಂದಣಿ ಮಾಡಿಸಿಕೊಳ್ಳುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದು.
ರೈತನಿಗೆ ಆತನ ಕೃಷಿ ಭೂಮಿಗೆ ಸಂಬಂಧಿಸಿದ ಹಾಗೆ ಯಾವುದೇ ಅನುದಾನ ಇದ್ದರೂ ಮಧ್ಯವರ್ತಿ ಕಾಟವಿಲ್ಲದ ನೇರವಾಗಿ ತಲುಪುತ್ತದೆ ಹೀಗಾಗಿ ಈ ಕಾರ್ಯಕ್ಕೆ ಮುಂದಾಗಿದ್ದೇವೆ. ಆಸ್ತಿಗಳ ನೋಂದಣಿ ಸಮಯದಲ್ಲಿಯೂ ಸಹ ಆಧಾರ್ ಕಡ್ಡಾಯವಾಗಿ ಕೇಳಲಾಗುತ್ತದೆ. ಆಗ ಆಧಾರ್ ಸಂಖ್ಯೆ ಕೊಡದಿದ್ದರೆ ಅದು ಅನುಮಾನಕ್ಕೆ ಕಾರಣವಾಗಿ ಅದರ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ತದನಂತರ ನೋಂದಣಿ ಮಾಡಿದರೆ ಒಂದಷ್ಟು ಅಕ್ರಮಗಳನ್ನು ತಡೆದಂತಾಗುತ್ತದೆ.
ಈ ಸುದ್ದಿ ಓದಿ:- ಎಕರೆಗೆ 50 ಲಕ್ಷ ಆದಾಯ ಕೊಡುವ ಅಗರ್ ವುಡ್ ಕೃಷಿಯ ಸಂಪೂರ್ಣ ಮಾಹಿತಿ.!
ಇದೆಲ್ಲದ ಲೆಕ್ಕಾಚಾರ ಮಾಡಿ ಈ ರೀತಿ ನಿಯಮ ಮಾಡಲಾಗಿದೆ ಎಂದು ಸಚಿವರು ಆಧಾರ್ ಜೋಡಣೆಯ ಅಗತ್ಯತೆಯನ್ನು ವಿವರಿಸಿದರು. ಈಗಾಗಲೇ ಇದರ ಸಂಬಂಧಿತ ಕೆಲಸಗಳು ನಡೆಯುತ್ತಿದೆ, ಇದರ ನಡುವೆ ಲೋಕಸಭೆ ಚುನಾವಣೆ (Parliment) ಘೋಷಣೆಯಾದರೂ ಮುಂದುವರಿಸುವಂತೆ ಗ್ರಾಮ ಲೆಕ್ಕಿಗರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಅಧಿಕಾರಿಗಳು ಕೆಲಸ ಮಾಡಲು ಮನೆಗಳಿಗೆ ಭೇಟಿ ನೀಡುತ್ತಾರೆ ಮತ್ತು ಜನರು ಸಹ ಕಂದಾಯ ಇಲಾಖೆ ಕಚೇರಿಗಳಿಗೆ ಭೇಟಿ ನೀಡಿ ಸಹಕರಿಸಬಹುದು ಎಂದು ಸಚಿವರು ತಿಳಿಸಿದ್ದಾರೆ. ಬ್ಯಾಂಕ್ಗಳಲ್ಲಿ ಸಾಲ ಪಡೆದರೆ, ಸಾಲ ತೀರುವಳಿಯಾದರೆ, ವಿಭಾಗ ಮಾಡಿಕೊಂಡರೆ, ಆಸ್ತಿಯನ್ನು ಅಡಮಾನ ಇಟ್ಟರೆ.
ಈ ಸುದ್ದಿ ಓದಿ:- ಸ್ಕೂಟರ್ ಖರೀದಿಗೆ ಸರ್ಕಾರದಿಂದ ಸಿಗಲಿದೆ 40,000 ಸಹಾಯಧನ.!
ಎಸಿ ನ್ಯಾಯಾಲಯದ ಆದೇಶಗಳಾಗಿದ್ದರೆ ಹೀಗೆ ಸಣ್ಣಪುಟ್ಟ ಬದಲಾವಣೆಗಳು ಆದಾಗ ಅದರ ವಿವರವನ್ನು ಪಹಣಿಯಲ್ಲಿ ದಾಖಲಿಸುವುದನ್ನು ಸ್ವಯಂಚಾಲಿತ ಮಾಡಲಾಗಿದೆ. ಇದಕ್ಕಾಗಿ ಗ್ರಾಮಾಧಿಕಾರಿಗಳು ಥಂಬ್ ನೀಡಿ ಧೃಢೀಕರಣ ಮಾಡುವುದು ಅಗತ್ಯವಿಲ್ಲ.
ಆಯಾ ಪಹಣಿ ಮೇಲೆ ಬ್ಯಾಂಕ್ಗಳು, ನ್ಯಾಯಾಲಯಗಳು ಹೀಗೆ ವಿವಿಧ ಮೂಲಗಳಿಂದ ನೀಡುವ ಮಾಹಿತಿಯನ್ನು ನೇರವಾಗಿ ಪಡೆದು ಅದನ್ನು ಪಹಣಿಯಲ್ಲಿ ದಾಖಲಿಸಲಾಗುತ್ತದೆ. ಇದಕ್ಕಾಗಿ ರೈತರು ಸರ್ಕಾರಿ ಕಚೇರಿಗಳಿಗೆ ಹತ್ತಾರು ಬಾರಿ ಅಲೆದಾಡುವ ಅಗತ್ಯವನ್ನು ತಪ್ಪಿಸಲಾಗುತ್ತಿದೆ. ಇದರಿಂದ ರೈತರ ಸಮಯ, ಅಧಿಕಾರಿಗಳ ಸಮಯ ಪೋಲಾಗುವುದು ಮತ್ತು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಹೇಳಿದರು.
ಆದಷ್ಟು ಬೇಗ ಈ ಆಧಾರ್ ಜೋಡಣೆ ಕಾರ್ಯ ಪೂರ್ತಿಯಾಗಬೇಕು ಹೀಗಾಗಿ ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.