ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಕರ್ನಾಟಕ ವಿದ್ಯಾಸಿರಿ ಯೋಜನೆಯನ್ನು (Vidhyasiri Scheme) ಆರಂಭಿಸಲಾಗಿದೆ.
ಈ ಯೋಜನೆ ಮೂಲಕ ಪ್ರಸಕ್ತ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇರುವ ನಿಬಂಧನೆಗಳು ಏನು? ಯಾವ ವಿಧಾನದಲ್ಲಿ ಅರ್ಜಿ ಸಲ್ಲಿಸಬೇಕು? ಮತ್ತು ಏನೆಲ್ಲ ದಾಖಲೆಗಳು ಬೇಕು? ಎನ್ನುವ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ.
ಈ ಸುದ್ದಿ ಓದಿ:- ಗೃಹ ಜ್ಯೋತಿ ಉಚಿತ ಕರೆಂಟ್ ಬಳಸುತ್ತಿರುವವರಿಗೆ ಬಿಗ್ ಅಪ್ಡೇಟ್.!
ಅರ್ಜಿ ಸಲ್ಲಿಸಲು ಅರ್ಹತೆಗಳು:-
* ಗ್ರಾಮೀಣ ಪ್ರದೇಶಗಳಿಂದ ದೂರ ಇರುವ ಸ್ಥಳಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಸರ್ಕಾರಿ ಆಥವಾ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ (Hostel Admission) ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ವಿದ್ಯಾಸಿರಿ ಯೋಜನೆ ಜಾರಿ ಮಾಡಲಾಗಿದೆ. ಇಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
* ವಿದ್ಯಾರ್ಥಿಯು ಕಡ್ಡಾಯವಾಗಿ ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
* ವಿದ್ಯಾರ್ಥಿಯು ಹಿಂದುಳಿದ ವರ್ಗದ ವರ್ಗಕ್ಕೆ ಸೇರಿರಬೇಕು ( SC / ST / OBC / EBC ಯಂತಹ ಮೀಸಲು ವರ್ಗಕ್ಕೆ ಸೇರಿದವರಾಗಿರಬೇಕು).
ಈ ಸುದ್ದಿ ಓದಿ:- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರದಿಂದ ಸಿಗಲಿದೆ 25 ಲಕ್ಷ.! ಆಸಕ್ತರು ಅರ್ಜಿ ಸಲ್ಲಿಸಿ.!
* 2A, 3A, ಮತ್ತು 3B ಯೋಜನೆಗಳ OBC / EBC ಅಡಿಯಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ವಾರ್ಷಿಕ ಕುಟುಂಬದ ಆದಾಯವು ಎಲ್ಲಾ ಮೂಲಗಳಿಂದ ರೂ.1,00,000 ಮೀರಬಾರದು, ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ಆದಾಯವು ಎಲ್ಲಾ ಮೂಲಗಳಿಂದ ರೂ.2.50 ಲಕ್ಷ ಮೀರಬಾರದು.
* ಕರ್ನಾಟಕದಲ್ಲಿ ಕನಿಷ್ಠ 7 ವರ್ಷ ವಿದ್ಯಾಭ್ಯಾಸ ಮಾಡಿರಬೇಕು ಮತ್ತು ಕಾಲೇಜಿನಲ್ಲಿ ಕನಿಷ್ಠ 75% ಹಾಜರಾತಿಯನ್ನು ಹೊಂದಿರಬೇಕು.
* ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ
ಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ – ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಸುದ್ದಿ ಓದಿ:- ಇ-ಸ್ವತ್ತು ಮಾಡಿಸಲು ಅಕ್ಕ-ಪಕ್ಕದವರು ಕೂಡ ಸಹಿ ಹಾಕಲೇಬೇಕಾ.? ಸಹಿ ಹಾಕಲು ನಿರಾಕರಿಸಿದರೆ ಏನು ಮಾಡಬೇಕು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!
* ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ್ಲ. (ಉದಾಹರಣೆಗೆ BA ನಂತರ B.Com ಓದುತ್ತಿರುವವರು ಅಥವಾ M.A (Eng) ಮಾಡಿ M.A(ಕನ್ನಡ) ಓದುತ್ತಿರುವವರು ಅರ್ಹರಾಗಿರುವುದಿಲ್ಲ.
ಸಿಗುವ ಅನುದಾನ:-
* ಸರ್ಕಾರಿ ಅಥವಾ ಅನುದಾನಿತ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ, ಊಟ ಮತ್ತು ವಸತಿ ಸಹಾಯ ಯೋಜನೆ ಅಥವಾ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಎರಡರಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.
* ವಿದ್ಯಾಸಿರಿ ಯೋಜನೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500 ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು ರೂ.15,000 ಸಹಾಯಧನವನ್ನು DBT ಮೂಲಕ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
* SSLC / PUC / ಪದವಿ ಸೆಮಿಸ್ಟರ್ ಅಂಕಪಟ್ಟಿ
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್ ಪ್ರತಿ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಶಾಲಾ ಶುಲ್ಕದ ಪಾವತಿ ಮಾಡಿರುವ ರಶೀದಿ
* ನಿವಾಸಿ ದೃಢೀಕರಣ ಪತ್ರ
* ಮೊಬೈಲ್ ಸಂಖ್ಯೆ
* ಇನ್ನಿತರ ಯಾವುದೇ ಪ್ರಮುಖ ದಾಖಲೆಗಳು.
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ನಲ್ಲಿ https://ssp.karnataka.gov.in ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು
* ಯಾವುದೇ ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.