Ayushman mitra recruitment: PUC ಪಾಸ್ ಆದವರಿಗೆ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಉದ್ಯೋಗ, ಆಸಕ್ತರು ಅರ್ಜಿ ಸಲ್ಲಿಸಿ.! ವೇತನ 30,000/-

ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆಯುಷ್ಮಾನ್ ಕಾರ್ಡ್ (Ayushman Card) ನೀಡುತ್ತಿದೆ. ಈ ಆಯುಷ್ಮಾನ್ ಕಾರ್ಡ್ ನಿಂದ ಬಡ ಕುಟುಂಬವೊಂದು ಗರಿಷ್ಠ ರೂ.5,00,000 ವರೆಗೆ ಆರೋಗ್ಯ ಸೇವೆ ಪಡೆಯಬಹುದು. ಆಯುಷ್ಮಾನ್ ಕಾರ್ಡ್ ತಯಾರಿಸುವ ವಿತರಿಸುವ ಕಾರ್ಯವನ್ನು ಆಯುಷ್ಮಾನ್ ಮಿತ್ರ ಮತ್ತು ಕಾಮನ್‌ವೆಲ್ತ್ ಸೇವಾ ಕೇಂದ್ರ ಮಾಡುತ್ತಿವೆ.

WhatsApp Group Join Now
Telegram Group Join Now

ಕೇಂದ್ರ ಸರ್ಕಾರದ ಈ ಯೋಜನೆಯನ್ನು ಯಶಸ್ವಿಯಾಗಿ ಎಲ್ಲಾ ಬಡ ಕುಟುಂಬಗಳಿಗೂ ತಲುಪಿಸುವ ಉದ್ದೇಶದಿಂದ ಈ ಯೋಜನೆ ಮಾಹಿತಿ ನೀಡಿ ಮತ್ತು ಪ್ರಯೋಜನ ಪಡೆಯಲು ಬೇಕಾದ ಸಹಕಾರ ಒದಗಿಸಲು ಪ್ರಾಥಮಿಕ ಕೇಂದ್ರಗಳಲ್ಲಿ ಆಯುಷ್ಮಾನ್ ಮಿತ್ರರನ್ನು (Ayushman Mitra) ನೇಮಕ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಡಿಯಲ್ಲಿ ಆರೋಗ್ಯ ಮಿತ್ರರಾಗಿ ಕಾರ್ಯನಿರ್ವಹಿಸಲು ಯಾರು ಅರ್ಹರು? ಅರ್ಜಿ ಹೇಗೆ ಸಲ್ಲಿಸಬೇಕು? ಎನ್ನುವ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಿ ಕೊಡುತ್ತಿದ್ದೇವೆ.

ಈ ಸುದ್ದಿ ಓದಿ:- ಕಡಿಮೆ ಖರ್ಚಿನಲ್ಲಿ ಕನಸಿನ ಮನೆ ನಿರ್ಮಾಣಕ್ಕೆ ಇಲ್ಲಿದೆ ಸುಲಭ ಉಪಾಯ.! ಮನೆ ಕಟ್ಟುವ ಆಸೆ ಇರುವವರು ತಪ್ಪದೆ ನೋಡಿ.!

ನೇಮಕಾತಿ ಸಂಸ್ಥೆ:- ಕೇಂದ್ರ ಸರ್ಕಾರ ಆಯುಷ್ಮಾನ್ ಯೋಜನೆ ವಿಭಾಗ
ಹುದ್ದೆಯ ಹೆಸರು:- ಆಯುಷ್ಮಾನ್ ಮಿತ್ರ
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:- ರೂ.15,000 ದಿಂದ ರೂ.30,000 ವರೆಗೆ ಮಾಸಿಕವಾಗಿ…

ಅರ್ಹತೆಗಳು:-

* ಭಾರತೀಯ ಪ್ರಜೆಯಾಗಿರಬೇಕು.
* 18 ವರ್ಷ ಮೇಲ್ಪಟ್ಟು, ದ್ವಿತೀಯ PUC ಯಲ್ಲಿ ತೇರ್ಗಡೆ ಹೊಂದಿರಬೇಕು.
* ಆಯುಷ್ಮಾನ್ ಭಾರತ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
* ಕಡ್ಡಾಯವಾಗಿ ಇಂಗ್ಲಿಷ್ ಮತ್ತು ಹಿಂದಿ ಬಲ್ಲವರಾಗಿರಬೇಕು ಮತ್ತು ಉತ್ತಮ ಸಂವಹನ ಕೌಶಲ್ಯವನ್ನು ಹೊಂದಿರಬೇಕು.
* ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
* ಅರ್ಜಿ ಸಲ್ಲಿಸಲು ಕೇಳಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಲೇಬೇಕು.

ಬೇಕಾಗುವ ದಾಖಲೆಗಳು:-

*  ಆಧಾರ್ ಕಾರ್ಡ್,
* ವೋಟರ್ ID,
* PAN ಕಾರ್ಡ್,
* ಬ್ಯಾಂಕ್ ಪಾಸ್ ಬುಕ್ ಪ್ರತಿ,
* ಮೂಲ ನಿವಾಸ ದೃಢೀಕರಣ ಪ್ರಮಾಣಪತ್ರ
* SSLC, PUC ಮಾರ್ಕ್ಸ್ ಕಾರ್ಡ್,
* ಪಾಸ್ಪೋರ್ಟ್ ಸೈಜ್ ಫೋಟೋ,
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ID
* ಇನ್ನಿತರ ಪ್ರಮುಖ ದಾಖಲೆಗಳು.

ಅರ್ಜಿ ಸಲ್ಲಿಸುವ ವಿಧಾನ:-

* ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಕೊಡಿ
* ಆಯುಷ್ಮಾನ್ ಮಿತ್ರ ಅರ್ಜಿ ನಮೂನೆ ಲಿಂಕ್ ಕ್ಲಿಕ್ ಮಾಡಿ, ನಿಮ್ಮ ನೋಂದಣಿ ಮಾಡಬೇಕು.
* ನೋಂದಣಿಯ ನಂತರ, ನಿಮ್ಮ ಬಳಕೆದಾರ ID ಮತ್ತು Password ಬಳಸಿ Login ಆಗಬೇಕು.
* ನಿಮ್ಮ ಹೆಸರು, ವಿಳಾಸ, ಆಧಾರ್ ಸಂಖ್ಯೆ, ಮೊಬೈಲ್ ನಂಬರ್, ನಿಮ್ಮ ವಿದ್ಯಾರ್ಹತೆ ಇತ್ಯಾದಿ ಮಾಹಿತಿಯನ್ನು ನಮೂದಿಸಿ, ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಮತ್ತು ತಪ್ಪದೇ ಅರ್ಜಿ ಸ್ವೀಕೃತಿ ಪ್ರತಿ ಪಡೆಯಿರಿ.
* ನೇಮಕಾತಿ ಸಮಯದಲ್ಲಿ ಸಂಬಂಧಪಟ್ಟ ಅಪ್ಡೇಟ್ ಗಳು ಅಭ್ಯರ್ಥಿ ನೀಡಿರುವ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ID ಗೆ ಸಂದೇಶದ ರೂಪದಲ್ಲಿ ಬರುತ್ತದೆ, ನಂತರ ತಿಳಿಸಿರುವ ಸೂಚನೆಯಂತೆ ನೀವು ಮುಂದುವರೆಯಬೇಕು.

ಈ ಸುದ್ದಿ ಓದಿ:- ರೈತರನ್ನು ಮದುವೆಯಾಗುವ ಯುವತಿಯರಿಗೆ 5 ಲಕ್ಷ ನಗದು.! ಕನ್ಯಾ ಭಾಗ್ಯದ ಬಗ್ಗೆ ಸರ್ಕಾರದ ನಿರ್ಧಾರ.!

ಇದು ಕೇಂದ್ರ ಸರ್ಕಾರದ ಉದ್ಯೋಗವಾಗಿರುವುದರಿಂದ ಯಾವುದೇ ರಾಜ್ಯದ ಆಸಕ್ತ ಅಭ್ಯರ್ಥಿಯು ಅರ್ಜಿ ಸಲ್ಲಿಸಬಹುದು. ಮೇಲೆ ತಿಳಿದಿರುವ ನಿಯಮದಂತೆ ಸರಿಯಾದ ವಿಧಾನದಲ್ಲಿ ಅರ್ಜಿ ಸಲ್ಲಿಸಿ, ಈ ಹುದ್ದೆಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಿ. ಮತ್ತೆ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಂಡು ಸಾಧ್ಯವಾದಷ್ಟು ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಸಿಗುವಂತೆ ಮಾಡಿ.

 

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now