ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಹೊಸ ಯೋಜನೆ ಜಾರಿ, ಧನಶ್ರೀ ಯೋಜನೆಯಡಿ ಮಹಿಳೆಯರಿಗೆ 30,000 ಸಾವಿರ ಉಚಿತ.!

 

WhatsApp Group Join Now
Telegram Group Join Now

ಕರ್ನಾಟಕ ರಾಜ್ಯದ ನೂತನ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು ದೇಶದಾದ್ಯಂತ ಸುದ್ದಿಯಲ್ಲಿದೆ. ಈ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾಗಿ ಕೂಡ ಹಲವು ಕಲ್ಯಾಣ ಯೋಜನೆಗಳನ್ನು ಸರ್ಕಾರ ಕೈಗೆತ್ತಿಕೊಂಡಿದೆ. ಆ ಪ್ರಯುಕ್ತವಾಗಿ ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಮಾಡಿರುವ ಕುರಿತು ಅಧಿಕೃತ ಪ್ರಕಟಣೆ ಕೂಡ ಹೊರ ಬಿತ್ತಿದೆ.

ಇಲಾಖೆ ವತಿಯಿಂದ ಮಹಿಳೆಯರಿಗೆ ಯಾವೆಲ್ಲ ಯೋಜನೆಗಳ ಸೌಲಭ್ಯಗಳು ಲಭ್ಯವಿದೆ? ಈ ಯೋಜನೆಗಳಿಂದ ಸಿಗುವ ಪ್ರಯೋಜನಗಳೇನು? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಕೊನೆಯ ದಿನಾಂಕ ಎಂದು? ಎನ್ನುವುದರ ಕುರಿತು ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.

ಉದ್ಯೋಗಿನಿ ಯೋಜನೆ:-

1. ಈ ಯೋಜನೆಯಲ್ಲಿ 18 ರಿಂದ 55 ವರ್ಷದ ಒಳಗಿನ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಇಚ್ಚಿಸಿದಲ್ಲಿ ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮಗಳ ಮೂಲಕ ಸಹಾಯಧನ ಪಡೆಯಬಹುದು
ಸಹಾಯಧನ:-
* ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಘಟಕ ವೆಚ್ಚ 1 ಲಕ್ಷದಿಂದ ಗರಿಷ್ಠ 3 ಲಕ್ಷದವರೆಗೆ ಸಾಲ ಲಭ್ಯವಿರುತ್ತದೆ. * ಇದರಲ್ಲಿ 50%ರಷ್ಟು ಸಹಾಯಧನ (ಆದಾಯ ಮಿತಿ 2 ಲಕ್ಷದ ಒಳಗಿರಬೇಕು)
* ಸಾಮಾನ್ಯ ವರ್ಗದ ಮಹಿಳೆಯರಿಗೆ ಘಟಕ ವೆಚ್ಚ ಗರಿಷ್ಠ 3 ಲಕ್ಷದವರೆಗೂ ಸಾಲ ಸೌಲಭ್ಯ, ಇದರಲ್ಲಿ 30%ರಷ್ಟು ಸಹಾಯಧನ (ಆದಾಯದ ಮಿತಿ 1.5 ಲಕ್ಷದ ಒಳಗಿರಬೇಕು).

2. ಚೇತನ ಯೋಜನೆ:-
ಈ ಯೋಜನೆಯಲ್ಲಿ 18 ವರ್ಷ ಮೇಲ್ಪಟ್ಟ ದಮನಿತ ಮಹಿಳೆಯರಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30,000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

3. ಧನಶ್ರೀ ಯೋಜನೆ:-
ಈ ಯೋಜನೆಯಡಿ 18 ವರ್ಷ ಮೇಲ್ಪಟ್ಟ 60 ವರ್ಷ ಒಳಗಿನ ವಯಸ್ಸಿನ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

4. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:-
ಈ ಯೋಜನೆಯಲ್ಲಿ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ

5. ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:-
1993-94 ಮತ್ತು 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30,000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ವಿಶೇಷ ಸೂಚನೆಗಳು:-

* ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು
* ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟನಲ್ಲಿಯೇ ಅರ್ಜಿ ಸಲ್ಲಿಸಬೇಕು.
* ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
ಈ ಎಲ್ಲ ಯೋಜನೆಗಳಿಗೆ ಅರ್ಜಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ.

* ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ / ಗ್ರಾಮ ಒನ್ / ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
* ಸರ್ಕಾರದ ಕೋಟ ಮತ್ತು ನಿಗಮದ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾನುಭವಿಗಳು ಮಾನ್ಯ ಸಚಿವರು / ಮಾನ್ಯ ಶಾಸಕರು / ಕರ್ನಾಟಕ ಸರ್ಕಾರದ ಮಾನ್ಯ ಅಧ್ಯಕ್ಷರು /ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 22.11.2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22.12.2023

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
* ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಥವಾ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರನ್ನು ಸಂಪರ್ಕಿಸಿ
* https://kswdc.karnataka.gov.in ವೆಬ್ಸೈಟ್ ನಲ್ಲಿ ಪಡೆಯಿರಿ.

 

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now